September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

ಉಜಿರೆ: ನಮ್ಮ ಅಂತರಂಗದ ಸಾಮರ್ಥ್ಯವನ್ನು ಅನಾವರಣ ಮಾಡುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳು ಓದುವುದು , ಬರೆಯುವುದು , ಕೇಳುವುದು ಮಾತ್ರವಲ್ಲದೆ ಸರಿಯಾಗಿ ಅಧ್ಯಯನ ಮಾಡಬೇಕು. ಇದರೊಂದಿಗೆ ಜ್ಞಾನವನ್ನು ಸಂಪಾದಿಸಬೇಕು. ಸಂಸ್ಕೃತವು ಅಂತಹ ಜ್ಞಾನ ಭಂಡಾರವಾಗಿದ್ದು ಮಾತ್ರವಲ್ಲದೆ ವೈಜ್ಞಾನಿಕ ಭಾಷೆ ಕೂಡ ಆಗಿದೆ. ಇದನ್ನು ತಿಳಿದರೆ ಉಳಿದ ಭಾಷೆಗಳನ್ನು ಸುಲಭವಾಗಿ ಅರಿಯಬಹುದು. ಇದರ ಸ್ವಾರಸ್ಯ ತಿಳಿದು ಸುಸಂಸ್ಕೃತರಾಗಿ. ಭಾಷಾ ಅಧ್ಯಯನದಿಂದ ಮೌಲ್ಯದೊಂದಿಗೆ ಉತ್ತಮ ಚಾರಿತ್ರ್ಯ ಸಂಪಾದಿಸಬಹುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಕಲಾ ವಿಭಾಗದ ಡೀನ್ ಡಾ. ಶ್ರೀಧರ ಭಟ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಮಾಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪಾಕ್ಷಿಕ ಸಂಸ್ಕೃತ ಡಿಜಿಟಲ್ ಪತ್ರಿಕೆಯನ್ನು ಹಾಗೂ ಪದಾಧಿಕಾರಿಗಳ ನಾಮಫಲಕವನ್ನು ಡಾ.ಶ್ರೀಧರ ಭಟ್ ಅವರು ಅನಾವರಣಗೊಳಿಸಿದರು. ಹಂಸಿನಿ ಭಿಡೆ ಹಾಗೂ ಬಳಗದಿಂದ ಸಂಸ್ಕೃತ ಗೀತಗಾಯನ ನಡೆಯಿತು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಪೃಥ್ವಿ ಹೆಗಡೆ ಪರಿಚಯಿಸಿ , ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ ವಂದಿಸಿದರು. ಉಪಾಧ್ಯಕ್ಷೆ ವೈಷ್ಣವಿ ಭಟ್ ನಿರೂಪಿಸಿದರು.

Related posts

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಪಶು ವೈದ್ಯ ಇಲಾಖೆ ಮೈಸೂರಿನ ಸೂಪರಿಟೆಂಡೆಂಟ್ ಜೆಸಿಂತಾ ಮೋರಸ್, ಹಾಗೂ ಕೃಷಿ ಇಲಾಖೆಯ ರೊನಾಲ್ಡ್ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya
error: Content is protected !!