22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!