24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!