22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!