September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು.

ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಕ್ಷತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶೋಲಿಯವರು ನಿರ್ವಹಿಸಿದರು.

Related posts

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!