July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು.

ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಕ್ಷತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶೋಲಿಯವರು ನಿರ್ವಹಿಸಿದರು.

Related posts

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!