April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಪ್ರಮಾಣವಚನವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.


ಆ ಬಳಿಕ ವಿದ್ಯಾರ್ಥಿ ಸರಕಾರ ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರವಾಗಿ ವಿಚಾರಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಬಳಗ ಸರ್ವ ರೀತಿಯ ಸಹಕಾರವನ್ನು ನೀಡಿದರು.
ಶಾಲಾ ಮುಖ್ಯಮಂತ್ರಿಯಾಗಿ ಸಂಜನಾ 10ಇ, ಉಪಮುಖ್ಯಮಂತ್ರಿಯಾಗಿ ಡೀತಮ್ 9 ಎ, ಕ್ರೀಡಾ ಮಂತ್ರಿಯಾಗಿ ನಿಖಿಲ್ ದೇವಾಡಿಗ10 ಸಿ, ಉಪ ಕ್ರೀಡಾಮಂತ್ರಿಯಾಗಿ ಶಶಾಂಕ್ 9 ಎ, ಸ್ವಚ್ಛತಾ ಮಂತ್ರಿಯಾಗಿ ಧನುಷ್ 10 ಸಿ , ಉಪ ಸ್ವಚ್ಛತಾ ಮಂತ್ರಿಯಾಗಿ ರೇಖಾ 9ಎ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿಯಾಗಿ ಸುಧೀಶಾ 10 ಡಿ, ಉಪಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಂತ್ರಿಯಾಗಿ ಪ್ರೀತಮ್ ಕೆ ವಿ 9 ಬಿ, ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ ನಿಖಿಲ್ 10 ಬಿ, ಉಪ ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ 9 ಎ, ವಾರ್ತಾ ಮಂತ್ರಿಯಾಗಿ ಪೂಜಾ 10 ಈ,
ಉಪ ವಾರ್ತಾ ಮಂತ್ರಿಯಾಗಿ ಸಂಸ್ಕೃತಿ ನಾಯಕ್ 9 ಇ ಇವರು ಆಯ್ಕೆಯಾಗಿರುತ್ತಾರೆಂದು ಸಂಸ್ಥೆಯ ಮುಖ್ಯಸ್ಥ ಉದಯ್ ಕುಮಾರ್ ಬಿ ತಿಳಿಸಿದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!