25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya
error: Content is protected !!