22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya
error: Content is protected !!