22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!