September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!