22.7 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ಬಳಂಜ: ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.
ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಕಷ್ಟು ವರ್ಷಗಳಿಂದ ಬಳಂಜದಲ್ಲಿ ಏರ್ಟೆಲ್ ಮೊಬೈಲ್ ಟವರ್ ಇದ್ದರೂ ನೆಟ್‌ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ ಎಂದು ಸ್ಥಳಿಯ ನಿವಾಸಿ ಕರುಣಾಕರ ಹೆಗ್ಡೆ ಬೊಕ್ಕಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಜನರಿಗೆ ನೆಟ್ವರ್ಕ್ ಸಮಸ್ಯೆಯಿಂದ ಮುಕ್ತಿ ಯಾವಾಗ,,‌‌,?ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಇಲ್ಲದೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ನಡೆಯುವುದಿಲ್ಲ.ಸಾಮಾನ್ಯವಾಗಿ ಎಲ್ಲಾ ಸವಲತ್ತುಗಳನ್ನು ಪಡೆಯಲು ರೇಷನ್,‌ಬ್ಯಾಂಕ್,ಸೈಬರ್,ಪಂಚಾಯತ್ ಹಾಗೂ ಮೊದಲಾದ ವ್ಯವಸ್ಥೆಗೆ ಮೊಬೈಲ್ ಫೋನ್ ಅಗತ್ಯ.ಹೀಗಿರುವಾಗ ನೆಟ್ವರ್ಕ್ ಇಲ್ಲವಾದರೆ ಯಾವ ಸವಲತ್ತು ಇದ್ದು ಏನು ಪ್ರಯೋಜನ.ಇದೇ ಸಮಸ್ಯೆಯಿಂದ ನಮ್ಮ ನಾಲ್ಕೂರು ಗ್ರಾಮದ ಜನರು ಬಹಳ ಇಕ್ಕಟ್ಟಿಗೆ ಸಿಲುಕಿದ್ದಾರೆ.ಒಂದು ಯಾವುದೇ ಸುದ್ದಿಯನ್ನು ಡೌನ್ ಲೋಡ್ ಮಾಡಲು ಮನೆಯಿಂದ ಹೊರಗೆ ಅಂದರೆ ಎತ್ತರದ ಪ್ರದೇಶದಲ್ಲಿ ಹೋಗಿ ಡೌನ್ಲೋಡ್ ಮಾಡಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.ಬಳಂಜ ದಲ್ಲಿ ಒಂದು ಏರ್ಟೆಲ್ ಟವರ್ ಇದ್ದು ಯಾವುದೇ ಪ್ರಯೋಜನವಾಗಿಲ್ಲ. ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಟವರ್ .ಇದಕ್ಕೆ ಸಂಬಂಧ ಪಟ್ಟ ಇಲಾಖೆ ‌ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕರುಣಾಕರ ಹೆಗ್ಡೆ ಆಗ್ರಹಿಸಿದ್ದಾರೆ.

Related posts

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!