25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!