September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya
error: Content is protected !!