22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!