22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!