23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು.

ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಕ್ಷತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಬಹಳ ದೊಡ್ಡದು ಎಂದು ತಿಳಿಸುತ್ತಾ ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪೋಷಕರು ಯಾವ ರೀತಿ ಮನೆಯಲ್ಲಿ ವಾತಾವರಣವನ್ನು ನಿರ್ಮಿಸಬೇಕು. ಎಂಬುದನ್ನು ಉದಾರಣೆಗಳ ಮೂಲಕ ಬಹಳ ಚೆನ್ನಾಗಿ ಪೋಷಕರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡಿದರು.

ಪ್ರೌಢ ಹಂತದಲ್ಲಿ ಮಕ್ಕಳಲ್ಲಿ ದೈಹಿಕವಾಗಿ ಮಾನಸಿಕವಾಗಿ ಬದಲಾವಣೆಯಾಗುತ್ತದೆ ಇದನ್ನು ಪೋಷಕರು ಅರ್ಥೈಸಿಕೊಂಡು ಮಕ್ಕಳೊಂದಿಗೆ ಪೋಷಕರಾಗಿ ಮಾತ್ರವಲ್ಲ ಸ್ನೇಹಿತರಾಗಿ ಇರಬೇಕೆಂದು ಕಿವಿಮಾತು ಹೇಳಿದರು. ಸುಮಾರು 60 ಜನ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಶೋಲಿಯವರು ನಿರ್ವಹಿಸಿದರು.

Related posts

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya
error: Content is protected !!