July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಪ್ರಮಾಣವಚನವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.


ಆ ಬಳಿಕ ವಿದ್ಯಾರ್ಥಿ ಸರಕಾರ ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರವಾಗಿ ವಿಚಾರಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಬಳಗ ಸರ್ವ ರೀತಿಯ ಸಹಕಾರವನ್ನು ನೀಡಿದರು.
ಶಾಲಾ ಮುಖ್ಯಮಂತ್ರಿಯಾಗಿ ಸಂಜನಾ 10ಇ, ಉಪಮುಖ್ಯಮಂತ್ರಿಯಾಗಿ ಡೀತಮ್ 9 ಎ, ಕ್ರೀಡಾ ಮಂತ್ರಿಯಾಗಿ ನಿಖಿಲ್ ದೇವಾಡಿಗ10 ಸಿ, ಉಪ ಕ್ರೀಡಾಮಂತ್ರಿಯಾಗಿ ಶಶಾಂಕ್ 9 ಎ, ಸ್ವಚ್ಛತಾ ಮಂತ್ರಿಯಾಗಿ ಧನುಷ್ 10 ಸಿ , ಉಪ ಸ್ವಚ್ಛತಾ ಮಂತ್ರಿಯಾಗಿ ರೇಖಾ 9ಎ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿಯಾಗಿ ಸುಧೀಶಾ 10 ಡಿ, ಉಪಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಂತ್ರಿಯಾಗಿ ಪ್ರೀತಮ್ ಕೆ ವಿ 9 ಬಿ, ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ ನಿಖಿಲ್ 10 ಬಿ, ಉಪ ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ 9 ಎ, ವಾರ್ತಾ ಮಂತ್ರಿಯಾಗಿ ಪೂಜಾ 10 ಈ,
ಉಪ ವಾರ್ತಾ ಮಂತ್ರಿಯಾಗಿ ಸಂಸ್ಕೃತಿ ನಾಯಕ್ 9 ಇ ಇವರು ಆಯ್ಕೆಯಾಗಿರುತ್ತಾರೆಂದು ಸಂಸ್ಥೆಯ ಮುಖ್ಯಸ್ಥ ಉದಯ್ ಕುಮಾರ್ ಬಿ ತಿಳಿಸಿದರು.

Related posts

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!