23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ ನಾಯಕ ಹಾಗೂ ಉಪನಾಯಕ ಹುದ್ದೆಗೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವವರ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಯವರು ಪ್ರಮಾಣವಚನವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.


ಆ ಬಳಿಕ ವಿದ್ಯಾರ್ಥಿ ಸರಕಾರ ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರವಾಗಿ ವಿಚಾರಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಬಳಗ ಸರ್ವ ರೀತಿಯ ಸಹಕಾರವನ್ನು ನೀಡಿದರು.
ಶಾಲಾ ಮುಖ್ಯಮಂತ್ರಿಯಾಗಿ ಸಂಜನಾ 10ಇ, ಉಪಮುಖ್ಯಮಂತ್ರಿಯಾಗಿ ಡೀತಮ್ 9 ಎ, ಕ್ರೀಡಾ ಮಂತ್ರಿಯಾಗಿ ನಿಖಿಲ್ ದೇವಾಡಿಗ10 ಸಿ, ಉಪ ಕ್ರೀಡಾಮಂತ್ರಿಯಾಗಿ ಶಶಾಂಕ್ 9 ಎ, ಸ್ವಚ್ಛತಾ ಮಂತ್ರಿಯಾಗಿ ಧನುಷ್ 10 ಸಿ , ಉಪ ಸ್ವಚ್ಛತಾ ಮಂತ್ರಿಯಾಗಿ ರೇಖಾ 9ಎ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿಯಾಗಿ ಸುಧೀಶಾ 10 ಡಿ, ಉಪಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಂತ್ರಿಯಾಗಿ ಪ್ರೀತಮ್ ಕೆ ವಿ 9 ಬಿ, ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ ನಿಖಿಲ್ 10 ಬಿ, ಉಪ ಆರೋಗ್ಯ ಮತ್ತು ಆಹಾರ ಮಂತ್ರಿಯಾಗಿ 9 ಎ, ವಾರ್ತಾ ಮಂತ್ರಿಯಾಗಿ ಪೂಜಾ 10 ಈ,
ಉಪ ವಾರ್ತಾ ಮಂತ್ರಿಯಾಗಿ ಸಂಸ್ಕೃತಿ ನಾಯಕ್ 9 ಇ ಇವರು ಆಯ್ಕೆಯಾಗಿರುತ್ತಾರೆಂದು ಸಂಸ್ಥೆಯ ಮುಖ್ಯಸ್ಥ ಉದಯ್ ಕುಮಾರ್ ಬಿ ತಿಳಿಸಿದರು.

Related posts

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!