April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಿದ ಪೋಷಕರ ಸಮಾವೇಶದಲ್ಲಿ ಮೂರು ತರಗತಿಗಳು ಮತ್ತು ಕ್ರೀಡಾ ಭಿತ್ತಿಪತ್ರಿಕೆಗಳ ಅನಾವರಣ ಕಾರ್ಯಕ್ರಮ ಜರಗಿತು. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು ಮಾತನಾಡುತ್ತಾ, ಹದಿಹರೆಯದ ಅವಧಿಯಲ್ಲಿ ಮಕ್ಕಳ ಬಗ್ಗೆ ವಿಶೇಷ ಗಮನ ಮತ್ತು ಕಾಳಜಿಯ ಅಗತ್ಯವಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಪೂರಕವಾಗಿ ಕಾರ್ಯ ನಿರ್ವಹಣೆ ಮಾಡಬೇಕಾದ ಅಗತ್ಯವಿರುತ್ತದೆ. ಅದಕ್ಕೆ ಪೋಷಕರ ಸಂಘವು ಉತ್ತಮ ವೇದಿಕೆಯಾಗಿದೆಯೆಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಅತಿಥಿಗಳು ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಪ್ರಸ್ತಾವನೆಯೊಂದಿಗೆ ವಾರ್ಷಿಕ ಚಟುವಟಿಕೆಗಳ ವಿವರವನ್ನು ನೀಡಿದರು. ಶಿಕ್ಷಕರಾದ ಸುಮನ್ ರವರು ವರದಿ ವಾಚಿಸಿದರು. ರವಿಚಂದ್ರರವರು ಶೈಕ್ಷಣಿಕ ವರ್ಷದ ನೂತನ ಶಿಕ್ಷಕ ರಕ್ಷಕ ಸಂಘದ ರಚನೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಭವಾನಿ ಮಾರ್ಪಾಲು ಮತ್ತು ನಿಕಟಪೂರ್ವ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರುರವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ರಾಜೇಶ್ ಕುರ್ಕಿಲು, ಶಿಕ್ಷಕರಾದ ಗಣೇಶ್ವರ್, ಕೃಷ್ಣಾನಂದ ಮತ್ತು ಚಿತ್ರಾರವರು ಉಪಸ್ಥಿತರಿದ್ದರು. ಶಿಕ್ಷಕರಾದ ಜಗದೀಶ್ ರವರು ಸ್ವಾಗತಿಸಿ, ರಾಜಶ್ರಿಯವರು ವಂದಿಸಿದರು, ಶ್ರೀಮತಿ ಕೋಕಿಲಾರು ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!