23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಿದ ಪೋಷಕರ ಸಮಾವೇಶದಲ್ಲಿ ಮೂರು ತರಗತಿಗಳು ಮತ್ತು ಕ್ರೀಡಾ ಭಿತ್ತಿಪತ್ರಿಕೆಗಳ ಅನಾವರಣ ಕಾರ್ಯಕ್ರಮ ಜರಗಿತು. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು ಮಾತನಾಡುತ್ತಾ, ಹದಿಹರೆಯದ ಅವಧಿಯಲ್ಲಿ ಮಕ್ಕಳ ಬಗ್ಗೆ ವಿಶೇಷ ಗಮನ ಮತ್ತು ಕಾಳಜಿಯ ಅಗತ್ಯವಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಪೂರಕವಾಗಿ ಕಾರ್ಯ ನಿರ್ವಹಣೆ ಮಾಡಬೇಕಾದ ಅಗತ್ಯವಿರುತ್ತದೆ. ಅದಕ್ಕೆ ಪೋಷಕರ ಸಂಘವು ಉತ್ತಮ ವೇದಿಕೆಯಾಗಿದೆಯೆಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಅತಿಥಿಗಳು ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಪ್ರಸ್ತಾವನೆಯೊಂದಿಗೆ ವಾರ್ಷಿಕ ಚಟುವಟಿಕೆಗಳ ವಿವರವನ್ನು ನೀಡಿದರು. ಶಿಕ್ಷಕರಾದ ಸುಮನ್ ರವರು ವರದಿ ವಾಚಿಸಿದರು. ರವಿಚಂದ್ರರವರು ಶೈಕ್ಷಣಿಕ ವರ್ಷದ ನೂತನ ಶಿಕ್ಷಕ ರಕ್ಷಕ ಸಂಘದ ರಚನೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಭವಾನಿ ಮಾರ್ಪಾಲು ಮತ್ತು ನಿಕಟಪೂರ್ವ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರುರವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ರಾಜೇಶ್ ಕುರ್ಕಿಲು, ಶಿಕ್ಷಕರಾದ ಗಣೇಶ್ವರ್, ಕೃಷ್ಣಾನಂದ ಮತ್ತು ಚಿತ್ರಾರವರು ಉಪಸ್ಥಿತರಿದ್ದರು. ಶಿಕ್ಷಕರಾದ ಜಗದೀಶ್ ರವರು ಸ್ವಾಗತಿಸಿ, ರಾಜಶ್ರಿಯವರು ವಂದಿಸಿದರು, ಶ್ರೀಮತಿ ಕೋಕಿಲಾರು ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya
error: Content is protected !!