25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya
error: Content is protected !!