25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya
error: Content is protected !!