25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟ‌ರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ ಬೀಸಲಾರಂಭಿಸಿದ್ದು ಈ ಮಧ್ಯೆ ಕೆಎಂಎಫ್ ಅಧ್ಯಕ್ಷರು ಬೆಲೆ ಏರಿಕೆಗೆ ಕಾರಣ, ಸ್ಪಷ್ಟನೆ ನೀಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಪ್ರಸ್ತುತ ಲೀಟರ್ ಹಾಲಿಗೆ 42 ರೂ. ಇದ್ದು, ಇದಕ್ಕೆ 2 ರೂ. ಹೆಚ್ಚಳ ಮಾಡಲಾಗುವುದು. ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ಆದರೆ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟ‌ರ್ (500 ಎಂಎಲ್) ಮತ್ತು ಒಂದು ಲೀಟರ್ (1000 ಎಂಎಲ್) ಪ್ಯಾಕೆಟ್‌ಗಳಿಗೆ ಮಾತ್ರ 50 ಮಿಲಿ ಲೀಟ‌ರ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೆಟ್‌ಗಳ ದರವನ್ನು 2 ರೂಪಾಯಿಯಂತೆ ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ನಂದಿನಿ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರ ಉತ್ಪನ್ನಗಳಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya
error: Content is protected !!