March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!