25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya
error: Content is protected !!