22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!