25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ, ಭರತನಾಟ್ಯ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿಸರ, ಸಾಂಸ್ಕೃತಿಕ ,ಭಾಷಾ ಸಮಾಜ ,ಎನ್ ಸಿ ಸಿ ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು.

ಆಯಾಯ ಕ್ಲಬ್ ನ ಶಿಕ್ಷಕರು ನಾಯಕರನ್ನು ಆಯ್ಕೆ ಮಾಡಿ ಗುಂಪಿನ ಹೆಸರನ್ನು ಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ರೀತಿಯಲ್ಲಿ ಅಲಂಕಾರಗೊಳಿಸಿ, ಕ್ಲಬ್ ನ ಸಂಯೋಜಕರಾದ ಉಪನ್ಯಾಸಕಿ ಪ್ರಜ್ಞ, ಶಿಕ್ಷಕಿ ಗೌತಮಿ, ಶಿಕ್ಷಕಿ ಭವಾನಿ ದಿವ್ಯ ಇವರ ಮುಂದಾಳತ್ವದಲ್ಲಿ ಉದ್ಘಾಟಿಸಲಾಯಿತು. ಕಬ್ಬಿನ ಶಿಕ್ಷಕರಾದಂತಹ ಸಾಂಸ್ಕೃತಿಕ ಕ್ಲಬ್ -ವಿನಯ್ ಮತ್ತು ಅಕ್ಷತ , ವಿಜ್ಞಾನ ಕ್ಲಬ್-ವಾಣಿ ಮತ್ತು ಉಷಾ, ಭಾಷಾ ಕ್ಲಬ್-ಮಮತಾ ಮತ್ತು ಮನೋಹರ್, ಸೇವಾದಳ ಕ್ಲಬ್ -ಶುಭ ಮತ್ತು ಚೈತ್ರ ಶ್ರೀ, ಪರಿಸರ ಕ್ಲಬ್ -ಶ್ವೇತಾ ಮತ್ತು ಸುಜಾತ, ಎನ್‌ ಸಿ ಸಿ -ಪವಿತ್ರ ಮತ್ತು ಸುಮನ್, ಸಮಾಜ ಕ್ಲಬ್- ಶ್ವೇತಾ ಮತ್ತು ಅಕ್ಷತ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!