September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ, ಭರತನಾಟ್ಯ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿಸರ, ಸಾಂಸ್ಕೃತಿಕ ,ಭಾಷಾ ಸಮಾಜ ,ಎನ್ ಸಿ ಸಿ ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು.

ಆಯಾಯ ಕ್ಲಬ್ ನ ಶಿಕ್ಷಕರು ನಾಯಕರನ್ನು ಆಯ್ಕೆ ಮಾಡಿ ಗುಂಪಿನ ಹೆಸರನ್ನು ಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ರೀತಿಯಲ್ಲಿ ಅಲಂಕಾರಗೊಳಿಸಿ, ಕ್ಲಬ್ ನ ಸಂಯೋಜಕರಾದ ಉಪನ್ಯಾಸಕಿ ಪ್ರಜ್ಞ, ಶಿಕ್ಷಕಿ ಗೌತಮಿ, ಶಿಕ್ಷಕಿ ಭವಾನಿ ದಿವ್ಯ ಇವರ ಮುಂದಾಳತ್ವದಲ್ಲಿ ಉದ್ಘಾಟಿಸಲಾಯಿತು. ಕಬ್ಬಿನ ಶಿಕ್ಷಕರಾದಂತಹ ಸಾಂಸ್ಕೃತಿಕ ಕ್ಲಬ್ -ವಿನಯ್ ಮತ್ತು ಅಕ್ಷತ , ವಿಜ್ಞಾನ ಕ್ಲಬ್-ವಾಣಿ ಮತ್ತು ಉಷಾ, ಭಾಷಾ ಕ್ಲಬ್-ಮಮತಾ ಮತ್ತು ಮನೋಹರ್, ಸೇವಾದಳ ಕ್ಲಬ್ -ಶುಭ ಮತ್ತು ಚೈತ್ರ ಶ್ರೀ, ಪರಿಸರ ಕ್ಲಬ್ -ಶ್ವೇತಾ ಮತ್ತು ಸುಜಾತ, ಎನ್‌ ಸಿ ಸಿ -ಪವಿತ್ರ ಮತ್ತು ಸುಮನ್, ಸಮಾಜ ಕ್ಲಬ್- ಶ್ವೇತಾ ಮತ್ತು ಅಕ್ಷತ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya
error: Content is protected !!