25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಂಬಾಕು ರಹಿತ ಜಾಗೃತಿಯನ್ನು ಮೂಡಿಸಿದರು. ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಚಿತ್ರಕಲೆ, ಪ್ರಬಂಧ, ಕವನವನ್ನು ರಚಿಸಿದರು.


ತಂಬಾಕು ರಹಿತ ಕಾರ್ಯಕ್ರಮದನ್ವಯ ಆರೋಗ್ಯ ಇಲಾಖೆಯಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ಮಾಹಿತಿಯನ್ನು ನೀಡಿದರು. ಅಲ್ಲದೆ ಸಿಸ್ಟರ್ ರಮ್ಯಾ ಹದಿಹರೆಯದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಸೋಮಶೇಖರ್ ಶೆಟ್ಟಿ ಮಕ್ಕಳಿಗೆ ಸ್ಕೌಟ್ಸ್ ಚಳವಳಿಯ ಬಗ್ಗೆ ತಿಳಿಯಪಡಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಕ್ಲಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಸಂಘಟನೆ ಹಾಗೂ ನಿರೂಪಣೆ ಸ್ವಾಗತ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಗೈಡರ್ ಶ್ರೀಮತಿ ಪ್ರಮೀಳಾ ನೆರವೇರಿಸಿದರು. ಸ್ಕೌಟ್ಸ್ ಮಾಸ್ಟರ್ ಮಂಜುನಾಥ್ ಧನ್ಯವಾದವಿತ್ತರು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
error: Content is protected !!