25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
error: Content is protected !!