ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Leave a Comment

error: Content is protected !!