30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya
error: Content is protected !!