22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಬೆಳ್ತಂಗಡಿ: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ , ಯಕ್ಷ ದ್ರುವ ಪಟ್ಲ ಪೌಂಡೇಶನ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆಯನ್ನು ಯಕ್ಷಗಾನದ ಹಿರಿಯ ಸಂಘಟಕ, ಮುತ್ಸದ್ದಿ ಭುಜಬಲಿ ಧರ್ಮಸ್ಥಳ ಇವರು ನೆರವೇರಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಶಿಕ್ಷಕ ವಿವೇಕಾನಂದ ಗೌಡ ವಹಿಸಿದರು. ಪಟ್ಲ ಪೌಂಡೇಶನ್ ನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಭಾಗವಹಿಸಿ, ವಿದ್ಯಾರ್ಥಿಗಳು ಈ ಅಮೂಲ್ಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಪಟ್ಲ ಪೌಂಡೇಶನ್ ಸಂಚಾಲಕರಾದ ಕಿರಣ್ ಶೆಟ್ಟಿ , ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಮಹಾಬಲ ಗೌಡ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಆದಪ್ಪ ಗೌಡ, ಯಕ್ಷಗಾನ ನಾಟ್ಯ ಗುರು ದೇವಿ ಪ್ರಸಾದ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿಜಯ ಕುಮಾರ್ ಎಂ ಸ್ವಾಗತಿಸಿ, ಶಿಕ್ಷಕರಾದ ಮಹೇಶ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಶ್ರೀಮತಿ ಹೇಮಲತಾ ಮತ್ತು ಮಮತಾ ಸಹಕರಿಸಿದರು. ಶಿಕ್ಷಕಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!