July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಬಾಲಕರ – ಬಾಲಕಿಯರ ವಿಭಾಗದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು, ಈ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರುವ ವಿದ್ವತ್ ಪಿಯು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಡಾ| ಮಹಿತಾ ಕುಮಾರಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ನುಡಿಯನ್ನು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಯವರು ನುಡಿದರು. ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯಾದ ಕುಮಾರಿ ಅನುಷಾ ಶೆಟ್ಟಿ ಯವರು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಯವರು, ಕೋಶಾಧಿಕಾರಿಯಾದ ಎಂ.ಕೆ.ಕಾಶಿನಾಥ್ ಭಟ್ , ಹಿರಿಯ ಸಲಹೆಗಾರರಾದ ರಾಧಾಕೃಷ್ಣ ರೈ ಯವರು, ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ , ಪ್ರಾಂಶುಪಾಲರಾದ ಡಾ| ಪ್ರಜ್ವಲ್ ಕಜೆ, ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya
error: Content is protected !!