23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya
error: Content is protected !!