September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya
error: Content is protected !!