September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya
error: Content is protected !!