23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya
error: Content is protected !!