July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!