25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ.

ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು.
ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಕೊಯ್ಯೂರು ಕುಂಟಿನಿ ರಝಾಕ್ ಅವರು ಯಂತ್ರದ ಮೂಲಕ ಮರ ಕತ್ತರಿಸಲು ಸಹಕರಿಸಿದರು. ಅಷ್ಟರಲ್ಲಿ ಹೈವೇ ಕಾಮಗಾರಿ ನಡೆಸುವವರ ಕಡೆಯಿಂದ ಜೆಸಿಬಿ ಬಂದು ತುಂಡರಿಸಿದ ಮರಗಳನ್ನು ಬದಿಗೆ ಸರಿಸುವ ಕ್ರಮ‌ಕೈಗೊಂಡರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya
error: Content is protected !!