23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!