September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!