April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

ಉಜಿರೆ :ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು ಆಶ್ರಯದಲ್ಲಿ ತೆಂಕುತಿಟ್ಟಿನ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ ಜು.1 ರಿಂದ ಜು.7 ರ ತನಕ ನಡೆಯಲಿದೆ.


ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ಪ್ರತಿದಿನ ಸಂಜೆ 4 ರಿಂದ 8 ಗಂಟೆಯವರೆಗೆ ತಾಳಮದ್ದಳೆ ನಡೆಯಲಿದ್ದು ಖ್ಯಾತ ಹಿಮ್ಮೇಳ ಮುಮ್ಮೇಳ ಕಲಾವಿದರು ಭಾಗವಹಿಸಲಿದ್ದಾರೆ. ಭಕ್ತ ಪ್ರಹ್ಲಾದ, ಸ್ಯಮಂತಕಮಣಿ, ಮೃತಸಂಜೀವಿನಿ, ಪಟ್ಟಾಭಿಷೇಕ, ಪ್ರತಿ ಸ್ವರ್ಗ, ಸುಧನ್ವ ಮೋಕ್ಷ, ಗಂಗಾ ಸಾರಥ್ಯ ಪ್ರಸಂಗದ ಪ್ರಸ್ತುತಿಯಾಗಲಿದೆ. ಜು.1 ರಂದು ಉದ್ಯಮಿ ಜಿ. ಬಲರಾಮ ಆಚಾರ್ಯ ಉದ್ಘಾಟಿಸಿ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾಪೋಷಕ ವೆಂಕಟೇಶ ನಾವಡ ಪೊಳಲಿ ಅವರಿಗೆ ಕುರಿಯ ಸ್ಮೃತಿ ಗೌರವ ಪ್ರದಾನ ನಡೆಯಲಿದೆ. ಜು.7ರಂದು ಸಮಾರೋಪ‌ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ.
ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ.ಟಿ.‌ಶ್ಯಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ, ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ, ಅರ್ಥಧಾರಿಗಳಾದ ಕೆ. ಭಾಸ್ಕರ ರಾವ್, ಭಾಸ್ಕರ ಬಾರ್ಯ ಅವರಿಗೆ ಕುರಿಯ ಸ್ನೃತಿ ಗೌರವ ಪ್ರದಾನ ನಡೆಯಲಿದೆ ಎಂದು ಕುರಿಯ ಪ್ರತಿಷ್ಠಾನ ಸಂಚಾಲಕ ಉಜಿರೆ ಅಶೋಕ ಭಟ್, ಸಪ್ತಾಹ ಸಂಯೋಜಕರಾದ ರಮೇಶ್ ಭಟ್ ಪುತ್ತೂರು, ಸ್ವಸ್ತಿಕ ಪದ್ಯಾಣ ತಿಳಿಸಿದ್ದಾರೆ.

Related posts

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!