25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

ಉಜಿರೆ :ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು ಆಶ್ರಯದಲ್ಲಿ ತೆಂಕುತಿಟ್ಟಿನ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ ಜು.1 ರಿಂದ ಜು.7 ರ ತನಕ ನಡೆಯಲಿದೆ.


ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ಪ್ರತಿದಿನ ಸಂಜೆ 4 ರಿಂದ 8 ಗಂಟೆಯವರೆಗೆ ತಾಳಮದ್ದಳೆ ನಡೆಯಲಿದ್ದು ಖ್ಯಾತ ಹಿಮ್ಮೇಳ ಮುಮ್ಮೇಳ ಕಲಾವಿದರು ಭಾಗವಹಿಸಲಿದ್ದಾರೆ. ಭಕ್ತ ಪ್ರಹ್ಲಾದ, ಸ್ಯಮಂತಕಮಣಿ, ಮೃತಸಂಜೀವಿನಿ, ಪಟ್ಟಾಭಿಷೇಕ, ಪ್ರತಿ ಸ್ವರ್ಗ, ಸುಧನ್ವ ಮೋಕ್ಷ, ಗಂಗಾ ಸಾರಥ್ಯ ಪ್ರಸಂಗದ ಪ್ರಸ್ತುತಿಯಾಗಲಿದೆ. ಜು.1 ರಂದು ಉದ್ಯಮಿ ಜಿ. ಬಲರಾಮ ಆಚಾರ್ಯ ಉದ್ಘಾಟಿಸಿ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾಪೋಷಕ ವೆಂಕಟೇಶ ನಾವಡ ಪೊಳಲಿ ಅವರಿಗೆ ಕುರಿಯ ಸ್ಮೃತಿ ಗೌರವ ಪ್ರದಾನ ನಡೆಯಲಿದೆ. ಜು.7ರಂದು ಸಮಾರೋಪ‌ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ.
ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ.ಟಿ.‌ಶ್ಯಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ, ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ, ಅರ್ಥಧಾರಿಗಳಾದ ಕೆ. ಭಾಸ್ಕರ ರಾವ್, ಭಾಸ್ಕರ ಬಾರ್ಯ ಅವರಿಗೆ ಕುರಿಯ ಸ್ನೃತಿ ಗೌರವ ಪ್ರದಾನ ನಡೆಯಲಿದೆ ಎಂದು ಕುರಿಯ ಪ್ರತಿಷ್ಠಾನ ಸಂಚಾಲಕ ಉಜಿರೆ ಅಶೋಕ ಭಟ್, ಸಪ್ತಾಹ ಸಂಯೋಜಕರಾದ ರಮೇಶ್ ಭಟ್ ಪುತ್ತೂರು, ಸ್ವಸ್ತಿಕ ಪದ್ಯಾಣ ತಿಳಿಸಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!