23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya
error: Content is protected !!