July 23, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya
error: Content is protected !!