September 6, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!