25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!