22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಬೆಳ್ತಂಗಡಿ: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ , ಯಕ್ಷ ದ್ರುವ ಪಟ್ಲ ಪೌಂಡೇಶನ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆಯನ್ನು ಯಕ್ಷಗಾನದ ಹಿರಿಯ ಸಂಘಟಕ, ಮುತ್ಸದ್ದಿ ಭುಜಬಲಿ ಧರ್ಮಸ್ಥಳ ಇವರು ನೆರವೇರಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಶಿಕ್ಷಕ ವಿವೇಕಾನಂದ ಗೌಡ ವಹಿಸಿದರು. ಪಟ್ಲ ಪೌಂಡೇಶನ್ ನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಭಾಗವಹಿಸಿ, ವಿದ್ಯಾರ್ಥಿಗಳು ಈ ಅಮೂಲ್ಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಪಟ್ಲ ಪೌಂಡೇಶನ್ ಸಂಚಾಲಕರಾದ ಕಿರಣ್ ಶೆಟ್ಟಿ , ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಮಹಾಬಲ ಗೌಡ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಆದಪ್ಪ ಗೌಡ, ಯಕ್ಷಗಾನ ನಾಟ್ಯ ಗುರು ದೇವಿ ಪ್ರಸಾದ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿಜಯ ಕುಮಾರ್ ಎಂ ಸ್ವಾಗತಿಸಿ, ಶಿಕ್ಷಕರಾದ ಮಹೇಶ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಶ್ರೀಮತಿ ಹೇಮಲತಾ ಮತ್ತು ಮಮತಾ ಸಹಕರಿಸಿದರು. ಶಿಕ್ಷಕಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!